ಹೌದು, ಕುಮಾರಸ್ವಾಮಿ ಅವರ ಅತ್ತೆ ವಿಮಲಾ ಅವರ ಹೆಸರಿಗೆ ನಗರದ ಏರ್ಪೋರ್ಟ್ ರಸ್ತೆ ಬಳಿ ಇರುವ ಗಂಗೇನಹಳ್ಳಿಯಲ್ಲಿನ 1.11 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಜಯಕುಮಾರ್ ಹಿರೇಮಠ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಡಿಕೆ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದರಿಂದ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮಟ್ಟಿನ ವಿಶ್ರಾಂತಿ ಸಿಕ್ಕಂತಾಗಿದೆ.
ಇನ್ನು ಈ ಪ್ರಕರಣ 2010ರಲ್ಲಿ ನಡೆದಿದ್ದು, ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಮಲ ಅವರಿಗೆ ಡಿನೋಟಿಫಿಕೇಶನ್ ಮಾಡಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಾಹಿತಿ ಕಲೆಹಾಕಿದ್ದ ಹಿರೇಮಠ್, ದೂರು ದಾಖಲಿಸಿದ್ದರು.