ಅತಿರುದ್ರ ಮಹಾಯಾಗದ ಪೂರ್ಣಾಹುತಿ– ಶೃಂಗೇರಿಯಲ್ಲಿ ದೇವೇಗೌಡರ ಕುಟುಂಬ

ಭಾನುವಾರ, 14 ಜನವರಿ 2018 (12:50 IST)
ಶೃಂಗೇರಿಯಲ್ಲಿ ನಡೆಸುತ್ತಿರುವ ಅತಿರುದ್ರ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕುಟುಂಬ ಶೃಂಗೇರಿಯಲ್ಲಿ ಬೀಡುಬಿಟ್ಟಿದೆ.
 
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ನಡೆಸುತ್ತಿರುವ ಈ ಯಾಗ 12 ದಿನಗಳಿಂದ ನಡೆಯುತ್ತಿದ್ದು, ದೇವೇಗೌಡ ಅವರು ಪತ್ನಿ ಚನ್ನಮ್ಮರೊಂದಿಗೆ ಕಳೆದ 12 ದಿನಗಳಿಂದ ಶೃಂಗೇರಿಯಲ್ಲಿ ವಾಸವಿದ್ದಾರೆ.

ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಸಿ.ಎನ್.ಮಂಜುನಾಥ ಅವರು ಕುಟುಂಬ ಸಮೇತರಾಗಿ ಶೃಂಗೇರಿಗೆ ಬಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ