ಅಂಬರೀಶ್, ಶ್ರೀನಿವಾಸ್ ಪರ ಎಚ್‌.ಡಿ.ದೇವೇಗೌಡ ಬ್ಯಾಟಿಂಗ್

ಮಂಗಳವಾರ, 21 ಜೂನ್ 2016 (16:42 IST)
ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ಅಂಬರೀಶ್ ಮತ್ತು ವಿ.ಶ್ರೀನಿವಾಸ್‌ಪ್ರಸಾದ್ ಪರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬ್ಯಾಟಿಂಗ್ ಆರಂಭಿಸಿದ್ದಾರೆ.
 
ಮಾಜಿ ಸಚಿವ ಅಂಬರೀಶ್ ಅವರಿಗೆ ದೂರವಾಣಿ ಕರೆ ಮಾಡಿರುವ ದೇವೇಗೌಡರು, ರಾಜೀನಾಮೆ ನೀಡುವುದು ಬೇಡ, ನೀನು ರಾಜಕೀಯದಲ್ಲಿ ಬೆಳೆಯಲು ,ತುಂಬಾ ಅವಕಾಶವಿದೆ.ತರಾತುರಿಯಲ್ಲಿ ಯಾವುದೇ ನಿರ್ಧಾರ ಬೇಡ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.  
 
ಮಾಜಿ ಸಚಿವ ಶ್ರೀನಿವಾಸ್‌ಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿದ ದೇವೇಗೌಡರು, ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಮನಸ್ಸಿಗೆ ನೋವು ಮಾಡಿಕೊಳ್ಳುವುದು ಬೇಡ. ಇದರಿಂದ ಆರೋಗ್ಯದಲ್ಲಿ ಏರುಪೇರಾಗಬಹುದು. ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಾಂತ್ವನ ಹೇಳಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.   
 
ಅಂಬರೀಶ್ ಮತ್ತು ಶ್ರೀನಿವಾಸ್ ಪ್ರಸಾದ್ ಜೆಡಿಎಸ್ ಪಕ್ಷಕ್ಕೆ ಬರುವುದಾದರೆ ಸದಾ ಸ್ವಾಗತವಿದೆ ಎಂದು ಜೆಡಿಎಸ್‌ನ ಮತ್ತೊಬ್ಬ ಮುಖಂಡ ಶರವಣನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ