ಜೆಡಿಎಸ್ ಪಕ್ಷದಲ್ಲಿ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಶಾಸಕರ ಸಭೆ ಕರೆದು ಅಭಿಪ್ರಾಯ ಕೇಳುವೆ. ನಾಳೆ ಅಥವಾ ನಾಡಿದ್ದು ಸಭೆ ಕರೆದು ಎಲ್ಲವನ್ನೂ ಅಂತಿಮಗೊಳಿಸುತ್ತೇನೆ. ಸಭೆಯಲ್ಲಿ ಯಾರು ಏನು ಹೇಳುತ್ತಾರೋ ಹೇಳಲಿ. ಶಾಸಕರ ಸಭೆಯಲ್ಲಿ ಎಲ್ಲರೂ ಚರ್ಚಿಸುವುದು ಒಳ್ಳೆಯದು ಎಂದು ದೇವೇಗೌಡರು ಹೇಳಿದರು. ಸಭೆಯಲ್ಲಿ ಮಾತನಾಡದಂತೆ ಯಾರನ್ನೂ ತಡೆಯೋಲ್ಲ ಎಂದೂ ಗೌಡರು ಹೇಳಿದರು.