ಬಿಜೆಪಿ ಭದ್ರಕೋಟೆ ಶಿವಮೊಗ್ಗದಲ್ಲಿ ಸಿದ್ದರಾಮಯ್ಯ-ದೇವೇಗೌಡ ಜಂಟಿ ಪ್ರಚಾರ!
ಇದುವರೆಗೆ ಬದ್ಧ ವೈರಿಗಳಾಗಿದ್ದ ಸಿದ್ದರಾಮಯ್ಯ-ದೇವೇಗೌಡರು ಮೊನ್ನೆಯಷ್ಟೇ ವೇದಿಕೆ ಹಂಚಿಕೊಂಡು ಅಗತ್ಯ ಬಂದರೆ ಜತೆಯಾಗಿ ಪ್ರಚಾರ ನಡೆಸುವುದಾಗಿ ಹೇಳಿದ್ದರು. ಅದೇ ರೀತಿ ಇದೀಗ ಬಿಜೆಪಿ ನಾಯಕರಾದ ಬಿಎಸ್ ಯಡಿಯೂರಪ್ಪ, ಈಶ್ವರಪ್ಪ ತವರಿನಲ್ಲಿ ಬಿಜೆಪಿ ಕೋಟೆ ಬೇಧಿಸಿ ಜೆಡಿಎಸ್ ಬಾವುಟ ಹಾರಿಸಲು ಶತ ಪ್ರಯತ್ನ ನಡೆಸಲಿದ್ದಾರೆ. ಇಲ್ಲಿ ಜೆಡಿಎಸ್ ನಿಂದ ಮಧು ಬಂಗಾರಪ್ಪ ಕಣಕ್ಕಿಳಿದಿದ್ದಾರೆ. ಇನ್ನು ಬಿಜೆಪಿಯಿಂದ ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಸ್ಪರ್ಧಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.