ಡಿಐಜಿ ರೂಪಾ, ಜೈಲು ಅಧೀಕ್ಷಕ ಕೃಷ್ಣಕುಮಾರ್ ಮಧ್ಯೆ ವಾಗ್ವಾದ

ಶನಿವಾರ, 15 ಜುಲೈ 2017 (18:05 IST)
ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಡಿಐಜಿ ರೂಪಾ ಮೌಡ್ಗಿಲ್, ಜೈಲು ಅಧೀಕ್ಷಕ ಕೃಷ್ಣಕುಮಾರ್ ಮಧ್ಯೆ ಭಾರಿ ವಾಗ್ವಾದ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ, ತೆಲಗಿಗೆ ವಿಐಪಿ ಆತಿಥ್ಯ ದೊರೆಯತ್ತಿದೆಯಲ್ಲದೇ ಅಕ್ರಮ ವ್ಯವಹಾರ ಕೂಡಾ ನಡೆಯುತ್ತಿದೆ ಎಂದು ಡಿಐಜಿ ರೂಪಾಯಿ ಸರಕಾರಕ್ಕೆ ವರದಿ ಸಲ್ಲಿಸಿದ್ದರು.
 
ಜೈಲಿನ ಅಕ್ರಮಗಳ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಿದ್ದರಿಂದ ಆಕ್ರೋಶಗೊಂಡ ಜೈಲಿನ ಅಧೀಕ್ಷಕ ಕೃಷ್ಣಕುಮಾರ್, ಹಿರಿಯ ಅಧಿಕಾರಿ ರೂಪಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೈದಿಗಳನ್ನು ಕೂಡಾ ಪ್ರಚೋದಿಸಿ ರೂಪಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಂತೆ ಪ್ರಚೋದನೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
 
ಜೈಲಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಮಾಹಿತಿ ನೀಡಿದ ಕೈದಿಯ ಮೇಲೆ ಜೈಲಿನ ಅಧೀಕ್ಷಕ ಹಲ್ಲೆ ಮಾಡಿದ್ದಾರೆ ಎಂದು ಕೈದಿಯ ಪತ್ನಿ ದೂರು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ