ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

Sampriya

ಭಾನುವಾರ, 10 ಆಗಸ್ಟ್ 2025 (13:27 IST)
Photo Credit X
ಮಂಗಳೂರು: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಸಂಬಂಧ ಇದೀಗ ಧರ್ಮಸ್ಥಳ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. 

ಬಂಧಿತರನ್ನು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂದು ಗುರುತು ಮಾಡಲಾಗಿದೆ. 

ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು.  

ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸ್‌ ಅಧಿಕಾರಿಯಿಂದ ದೂರು ದಾಖಲಾದ
ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ಹುಡುಕುತ್ತಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ