ಗಣೇಶೋತ್ಸವಕ್ಕೆ ತಟ್ಟಿದ ಧರ್ಮ ದಂಗಲ್ ಬಿಸಿ

ಸೋಮವಾರ, 29 ಆಗಸ್ಟ್ 2022 (18:27 IST)
ಬೆಂಗಳೂರಿನಲ್ಲಿ  ಗಣೇಶೋತ್ಸವಕ್ಕೆ  ಧರ್ಮ ದಂಗಲ್ ಬಿಸಿ ತಟ್ಟಿದ್ದು, ​​ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಶ್ವ ಹಿಂದೂ ಪರಿಷತ್ ಪೋಸ್ಟರ್​​ ಅಂಟಿಸುತ್ತಿದ್ದಾರೆ. ವಿಹೆಚ್​​​ಪಿ​ ಪೋಸ್ಟರ್​ಗೆ ವಿಶ್ವ ಸನಾತನ ಪರಿಷತ್ ಬೆಂಬಲ ನೀಡುತ್ತಿದೆ. ಗಣೇಶ ಚತುರ್ಥಿಗೆ ಬಟ್ಟೆ, ಹೂವು, ಹಣ್ಣು, ತರಕಾರಿಯನ್ನು ಹಿಂದೂಗಳ ಅಂಗಡಿಗಳಲ್ಲೇ ಖರೀದಿ ಮಾಡಿ ಎಂದು ಪೋಸ್ಟರ್​​ ಅಂಟಿಸುತ್ತಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ. ಈ ಕುರಿತು ಮಾತನಾಡಿದ ವಿಶ್ವ ಸನಾತನ ಪರಿಷತ್​​​​​​​​ ಅಧ್ಯಕ್ಷ ಭಾಸ್ಕರನ್ ಹಬ್ಬಕ್ಕೆ ಏನೇ ಖರೀದಿಸಬೇಕೆಂದರೂ ಹಿಂದೂ ಅಂಗಡಿಗೆ ಹೋಗಿ ಎಂದು ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ