ರಾಜ್ಯದಲ್ಲಿ ಶುರುವಾಯ್ತು ಧರ್ಮ ದಂಗಲ್

ಗುರುವಾರ, 24 ನವೆಂಬರ್ 2022 (18:07 IST)
ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಟಿಯಲ್ಲಿ ಮುಸ್ಲಿಂ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದಾರೆ.ಮುಸ್ಲಿಂ ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಯಾವೊಬ್ಬ ಮುಸ್ಲಿಂರು ಅವರ ಪರವಾಗಿ ನಿಲ್ಲುವುದಿಲ್ಲ.ಬೇರೆ ಧರ್ಮಗಳಲ್ಲಿ ತಪ್ಪು ಮಾಡಿದವರ ಪರವಾಗಿ ನಿಲ್ಲೋದನ್ನ ನಾವು ನೋಡಿದ್ದೇವೆ.ಮುಸ್ಲಿಂ ಮಹಿಳೆ ಮೇಲೆ ರೇಪ್ ಮಾಡಿದ 12 ಜನರು ಜೈಲಿಂದ ಹೊರಗಡೆ ಬಂದಾಗ ಸ್ವಾಗತ ಮಾಡಿದ್ದಾರೆ.ಮುಸ್ಲಿಂ ಅವರನ್ನ ಕೊಂದು ಜೈಲಿಂದ ಹೊರಗಡೆ ಬಂದವರನ್ನ ರಾಜ್ಯ ಅತಿಥಿ ನೀಡಿ, ರಾಜಕೀಯ ವ್ಯಕ್ತಿಯಾಗಿ ಬೆಳೆಸಿದ್ದಾರೆ .ಆದ್ರೆ ಮುಸ್ಲಿಂ ಸಮುದಾಯದಲ್ಲಿ ಒಂದು ತಪ್ಪು ಮಾಡ್ತೇವೆ.ತಪ್ಪು ನಡೆದಾಗ ಮೌನವಾಗಿ‌ ಇರುತ್ತೇವೆ ಎಂದು ಅಸಾಮಾಧಾನ ಹೊರಹಾಕಿದ್ದಾರೆ
 
ಇನ್ನೂ ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ್ರೆ ಮುಸ್ಲಿಂ ರಾಷ್ಟ್ರಗಳಿಂದ ನೀವು ಯಾವುದನ್ನು ಖರೀದಿ ಮಾಡ್ಬೇಡಿ.ಒಂದು ಸಮಾಜ ಶಾಂತಿ ಇರಬೇಕು ಅಂದ್ರೆ ಎಲ್ಲಾ ಜಾತಿಯರು ಅನ್ಯಮಿತವಾಗಿರಬೇಕು ಅದು ಅವಶ್ಯಕತೆ ಕೂಡ ಅನಿವಾರ್ಯತೆ ಕೂಡ ಇರುತ್ತೆ.ಇಲ್ಲಾಂದ್ರೆ ಎಲ್ಲಾ ಮುಸ್ಲಿಂರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಮುಸ್ಲಿಂ ಮುಖಂಡ ಆಕ್ರೋಶ ಹೊರಹಾಕಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ