ಬಾದಾಮಿ ಕ್ಷೇತ್ರಕ್ಕೆ ಅತಿಥಿ ಶಾಸಕರಾಗಬೇಡಿ ಎಂದ ಯುವಕನಿಗೆ ಸಿದ್ದರಾಮಯ್ಯ ಹೇಳಿದ್ದೇನು?

ಭಾನುವಾರ, 16 ಜೂನ್ 2019 (09:41 IST)
ಬೆಂಗಳೂರು : ಟ್ವೀಟರ್ ನಲ್ಲಿ ಕಾಲೆಳೆದ ಬಾದಾಮಿ ಕ್ಷೇತ್ರದ ಯುವಕನಿಗೆ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ತಕ್ಕ ಉತ್ತರ ನೀಡಿದ್ದಾರೆ.




ಎರಡು ದಿನದ ಹಿಂದೆ ಟ್ವೀಟ್ ಮಾಡಿದ್ದ ಬಾದಾಮಿ ಕ್ಷೇತ್ರದ ಯುವಕನೊಬ್ಬ, ಬಾದಾಮಿ ಕ್ಷೇತ್ರಕ್ಕೆ ಅತಿಥಿ ಶಾಸಕರಾಗಬೇಡಿ. ಕ್ಷೇತ್ರಕ್ಕೆ ಆಗಾಗ ಭೇಟಿ ನೀಡಿ ಎಂದು ಬಾದಾಮಿ ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯರ ಕಾಲೆಳೆದಿದ್ದ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು 1,300 ಕೋಟಿ ಹಣ ಬಿಡುಗಡೆಯಾಗಿ ಕಾಮಗಾರಿ ನಡೆಯುತ್ತಿದೆ. ನನ್ನದು ಸಾಧನೆ ಬಗ್ಗೆ ತುತ್ತೂರಿ ಊದುವ ಜಾಯಮಾನವಲ್ಲ. ನಾನು ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಶಾಸಕನಾಗಿ ಆಯ್ಕೆಯಾದ ಬಳಿಕ 50 ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಈ ಬಗ್ಗೆ ಜನರಿಗೆ ಗೊತ್ತಿದೆ. ರಾಜಕೀಯ ವಾಗ್ದಾಳಿ ಮಾಡುವುದರಲ್ಲಿ ನನಗೆ ಆಸಕ್ತಿ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ