ವುಹಾನ್ಗೆ ಹೋಗಿ ವೈರಸ್ ಬಿಟ್ಟಿದ್ವಾ : ಸುಧಾಕರ್ ಕಿಡಿ

ಶನಿವಾರ, 24 ಡಿಸೆಂಬರ್ 2022 (09:41 IST)
ಚಿಕ್ಕಬಳ್ಳಾಪುರ : ಇಡೀ ವಿಶ್ವದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ರೆ ಕಾಂಗ್ರೆಸ್ನವರು ನಾವೇ ಚೀನಾದ ವುಹಾನ್ಗೆ ಹೋಗಿ ಕೊರೊನಾ ವೈರಸ್ ಬಿಟ್ಟಂತೆ ಮಾತನಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಕಿಡಿಕಾರಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ವಿಶ್ವದಲ್ಲೇ ಕೋವಿಡ್ನಿಂದ ಏನಾಗ್ತಿದೆ ಅಂತ ಜನಸಾಮಾನ್ಯರಿಗೆ ಗೊತ್ತಾಗುತ್ತಿದೆ. ಆದ್ರೆ ಕಾಂಗ್ರೆಸ್ ನಾಯಕರಿಗೆ ಏಕೆ ಗೊತ್ತಾಗುತ್ತಿಲ್ಲ? ಯಾವುದೇ ಸರ್ಕಾರ ಇರಲಿ, ಜನರ ರಕ್ಷಣೆಗೆ ಅದ್ಯತೆ ನೀಡಬೇಕು.

ಸಹಕಾರ ಕೊಡದಿದ್ರೂ ಪರವಾಗಿಲ್ಲ ಸುಮ್ಮನಾದರೂ ಇರಿ. ಆದರೆ ಜನರ ಆರೋಗ್ಯದ ಜೊತೆ ಚೆಲ್ಲಾಟ ಆಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೂ ಭಾರತ್ ಬಯೋಟೆಕ್ನ ನಸೆಲ್ ಸ್ಪೈ ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ನೆಜಲ್ ಸ್ಪೈ ವ್ಯಾಕ್ಸಿನೇಷನ್ ನಿಂದಾಗಿ ಮೂಗಿನ ಮೂಲಕ ಡ್ರಾಪ್ಸ್ ಹಾಕಿಕೊಳ್ಳಲು ಅವಕಾಶ ಆಗಲಿದೆ. ಇದು ಲಸಿಕೆ ನೀಡುವ ವೇಗವನ್ನು ಹೆಚ್ಚಿಸುತ್ತದೆ. ಇದು ಕೂಡ ಬಹಳ ಪ್ರಭಾವಿತವಾಗಿ ಕೆಲಸ ಮಾಡಲಿದೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ ಎಂದು ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ