ಜನವರಿ 17, 18ರಂದು ಅಮಿತ್ ಶಾ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ- ಸಿಎಂ

ಶನಿವಾರ, 11 ಜನವರಿ 2020 (10:20 IST)
ಬೆಂಗಳೂರು : ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ಜನವರಿ 17, 18ರಂದು ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ. ಅವರನ್ನು ಅಲ್ಲೇ ಭೇಟಿ ಮಾಡಿ ಸಂಪುಟ ವಿಸ್ತರಣೆ  ಬಗ್ಗೆ ಚರ್ಚೆ ಮಾಡುವೆ. ಅಮಿತ್ ಶಾ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುವೆ. ಹೀಗಾಗಿ ಅಮಿತ್ ಶಾ ಭೇಟಿಗೆ ದೆಹಲಿ ಹೋಗುತ್ತಿಲ್ಲ’  ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ