ದೇವೇಗೌಡರನ್ನು ತೆಗಳಿದ್ದಕ್ಕೆ ಹೊಳೆನರಸೀಪುರ ಬಂದ್!

ಶನಿವಾರ, 1 ಏಪ್ರಿಲ್ 2017 (11:13 IST)
ಹಾಸನ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಅವಮಾನ ಮಾಡಿದ್ದನ್ನು ಖಂಡಿಸಿ ಇಂದು ಹೊಳೆನರಸೀಪುರದಲ್ಲಿ ಬಂದ್ ಆಚರಿಸಲಾಗುತ್ತಿದೆ.

 

ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಆಚರಣೆ ಮಾಡಲಾಗುತ್ತಿದೆ. ಜೆಡಿಎಸ್ ಪಕ್ಷ ಬಂದ್ ಗೆ ಕರೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ದೇಶ ದ್ರೋಹಿ ಎಂದು ಬರೆದು ಅವಮಾನ ಮಾಡಲಾಗಿತ್ತು.

ಇದೇ ಕಾರಣಕ್ಕೆ ಬಂದ್ ಗೆ ಕರೆ ನೀಡಲಾಗಿದೆ. ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಕೇಸು ದಾಖಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ