ವಿಜಯಪುರ ಕಾಂಗ್ರೆಸ್ ನಲ್ಲಿ ಭಿನ್ನಮತ; ಶಾಸಕರ ಪ್ರತಿಕೃತಿ ದಹನ

ಬುಧವಾರ, 4 ಏಪ್ರಿಲ್ 2018 (18:10 IST)
ಸ್ಥಳೀಯ ಕಾಂಗ್ರೆಸ್ ಶಾಸಕ ಮಕ್ಬೂಲ್ ಬಾಗವಾನ್ ಗೆ ಟಿಕೇಟ್ ನೀಡಬಾರದು ಎಂದು ಆಗ್ರಹಿಸಿ ಕೆಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. 
ನಗರದ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತರು ಯಾವುದೇ ಕಾರಣಕ್ಕೂ ವಿಜಯಪುರ ನಗರ ಶಾಸಕ ಬಾಗವಾನ್ ಅವರಿಗೆ ಟಿಕೆಟ್ ನೀಡಬಾರದು. 
 
ಪಕ್ಷದಲ್ಲಿ ಅವರು ಸಕ್ರಿಯರಾಗಿ ಕಾರ್ಯ ನಿರ್ವಹಿಸಿಲ್ಲ. ಅವರಿಂದ ನಗರದ ಅಭಿವೃದ್ದಿ ಕಂಡಿಲ್ಲ ಎಂದು ದೂರಿದರು. ಅಷ್ಟೇ ಅಲ್ಲ ಕೆಲ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ