ನಾಳೆ ನೇರಳ ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ಶನಿವಾರ, 26 ಆಗಸ್ಟ್ 2023 (14:27 IST)
ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಹಾಗೂ ಕಂಗೇರಿಯಿಂದ ಚೆಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ವಿಸ್ತರಣೆ ಮಾರ್ಗಗಳ ಹಿನ್ನಲೆ ಮೆಟ್ರೋ ಸೇವೆಯಲ್ಲಿ ನಾಳೆ ವ್ಯತ್ಯಯ ಉಂಟಾಗಲಿದೆ.ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳಲೂ ಹೆಚ್ಚಿನ ಸಮಯದ ಅಗತ್ಯವಿರುತ್ತದೆ.ಈ ನಿಟ್ಟಿನಲ್ಲಿ ರೈಲು ಸೇವೆಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು BMRCL ತಿಳಿಸಿದೆ.
ಮಧ್ಯಾಹ್ನ 1.00 ಗಂಟೆಯವರೆಗೆ ಈ ಮಾರ್ಗಗಳಲ್ಲಿ ರೈಲು ಸೇವೆಗಳು ಲಭ್ಯವಿರುವುದಿಲ್ಲ 
 
.1.ಮೈಸೂರು ರಸ್ತೆ ಮತ್ತು ಕೆಂಗೇರಿ ಮೆಟ್ರೋ ಸೇವೆ ವ್ಯತ್ಯಯವಾಗಲಿದೆ.
 
2. ಬೈಯಪ್ಪನಹಳ್ಳಿ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ
 
3. ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ಮೆಟ್ರೋ ಸಾಚಾರದಲ್ಲಿ ವ್ಯತ್ಯಯವಾಗಲಿದೆ
 
ಬೆಳಿಗ್ಗೆ 7.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಸಂಚಾರ ವ್ಯತ್ಯಯವಾಗಲಿದೆ.ಎಂದಿನಂತೆ ಮಧ್ಯಾಹ್ನ 1:00 ಯಿಂದ ರಾತ್ರಿ 11:00 ಗಂಟೆಯವರೆಗೂ ಮೆಟ್ರೋ ಸಂಚಾರ ಆರಂಭವಿರುತ್ತೆ .ಮೆಟ್ರೋ ಸಂಚಾರ ವ್ಯತೆಯದಿಂದ ಸಹಕರಿಸುವಂತೆ ಪ್ರಯಾಣಿಕರಲ್ಲಿ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ