ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ರಾಮಕಥಾ ಗಾಯಕಿ ಪ್ರೇಮಲತಾ, ಪ್ರೇಮಲತಾ ಪತಿ ದಿವಾಕರ ಶಾಸ್ತ್ರಿಗೆ ಬೆದರಿಕೆ ಕರೆಗಳು ಬಂದಿವೆ. ಗುಂಡಿಟ್ಟು ಕೊಲ್ಲುವುದಾಗಿ ದೂರವಾಣಿ ಮೂಲಕ ಬೆದರಿಕೆ ಹಾಕಲಾಗಿದ್ದು, ಭಯಭೀತರಾದ ದಂಪತಿ ತಮಗೆ ರಕ್ಷಣೆ ನೀಡುವಂತೆ ಬನಶಂಕರಿ ಪೊಲೀಸರಿಗೆ ಮೊರೆ ಹೋಗಿದ್ದಾರೆ. ದೂರುದಾರ ದಂಪತಿಗೆ ಕಲಿ ಯೋಗೇಶ್ನಿಂದ ಬೆದರಿಕೆ ಕರೆ ಬಂದಿರುವುದಾಗಿ ತಿಳಿದುಬಂದಿದೆ.