ಡಿಜೆಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣ; ಆತಂಕ ವ್ಯಕ್ತಪಡಿಸಿದ ಸಿಎಂ, ರಾಜ್ಯಪಾಲರು

ಬುಧವಾರ, 12 ಆಗಸ್ಟ್ 2020 (11:33 IST)
ಬೆಂಗಳೂರು : ಡಿಜೆಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಗಲಭೆ ಬಗ್ಗೆ ರಾಜ್ಯಪಾಲರು ಆತಂಕ ವ್ಯಕ್ತಪಡಿಸಿದ್ದಾರೆ.

ಗಲಭೆ ಬಗ್ಗೆ ರಾಜ್ಯಪಾಲರಿಗೆ ಗೃಹ ಇಲಾಖೆ ವಿವರಣೆ ನೀಡಿದೆ. ಕಾರಣ, ಪರಿಸ್ಥಿತಿ ನಿಯಂತ್ರಣದ ಬಗ್ಗೆ, ದುಷ್ಕರ್ಮಿಗಳ ಬಂಧನ, ಸಾವು ನೋವಿನ ಬಗ್ಗೆ ವಿವರಣೆ ನೀಡಿದೆ. ಪ್ರಕರಣದ ಸಂಬಂಧ ತನಿಖೆ ನಡೆಯುತ್ತಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಹಾಗೇ ಸಿಎಂ ಬಿಎಸ್ ವೈ ಕೂಡ ಈ ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ