ಕಾಂಗ್ರೆಸ್ ಶಾಸಕರಿಗೆ ಇಂದು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಸಂಭ್ರಮಾಚರಣೆ ಜೊತೆಗೆ ಡಿನ್ನರ್ ಆಯೋಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಲ್ಲಿರುವಾಗಲೇ ಈ ಔತಣಕೂಟ ಮಹತ್ವ ಪಡೆದುಕೊಂಡಿದೆ.
ಮುಖ್ಯಮಂತ್ರಿ ಬದಲಾವಣೆಗಾಗಿ ಡಿಕೆಶಿ ಬಣ ಪಟ್ಟು ಹಿಡಿದಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಯೂ ಆಗಬೇಕು ಎಂದು ಸಿದ್ದರಾಮಯ್ಯ ಬಣ ಆಗ್ರಹಿಸಿತ್ತು. ಇದರ ನಡುವೆ ಈಗ ಡಿಕೆ ಶಿವಕುಮಾರ್ ಆರು ವರ್ಷಗಳನ್ನು ಪೂರೈಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಡಿಕೆ ಶಿವಕುಮಾರ್ ಇಂದು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದೇನೆ. ಇನ್ನೊಂದು ದಿನ ಎಲ್ಲಾ ಪರಾಜಿತ ಅಭ್ಯರ್ಥಿಗಳಿಗೆ ಭೋಜನ ಕೂಟ ಆಯೋಜಿಸಲಿದ್ದೇನೆ ಎಂದಿದ್ದಾರೆ.