ಸಚಿವ ಡಿಕೆ ಶಿವಕುಮಾರ್ ಬಂಧನವಾಗುತ್ತಾ? ನಾನು ಹೆದರಲ್ಲ ಎಂದ್ರು ಡಿಕೆಶಿ

ಸೋಮವಾರ, 10 ಸೆಪ್ಟಂಬರ್ 2018 (09:21 IST)
ಬೆಂಗಳೂರು: ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ಬಂಧನವಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಇದರ ಬೆನ್ನಲ್ಲೇ ಯಾವುದಕ್ಕೂ ನಾನು ಹೆದರಲ್ಲ ಎಂದಿದ್ದಾರೆ.

ಈ ಎಲ್ಲಾ ಸುದ್ದಿಗಳ ಬೆನ್ನಲ್ಲೇ ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿರುವ ಸಚಿವ ಡಿಕೆಶಿ ಎಲ್ಲಾ ವಿಚಾರಗಳನ್ನು ಅವರೊಂದಿಗೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯಾವುದಕ್ಕೂ ಹೆದರದಿರುವಂತೆ ಸಚಿವರಿಗೆ ಸ್ವಾಮೀಜಿ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

ನಾನು ಅರೆಸ್ಟ್ ಆಗುತ್ತೇನೆ ಎಂಬ ಸುದ್ದಿ ಆಗಾಗ ಬರುತ್ತಲೇ ಇರುತ್ತದೆ. ಇದಕ್ಕೆಲ್ಲಾ ಹೆದರಲ್ಲ ಎಂದು ಸಚಿವರು ಹೇಳಿದ್ದಾರೆ. ಈ ನಡುವೆ ಇಂದು ಸಚಿವ ಡಿಕೆ ಶಿವಕುಮಾರ್  ನೆರೆ ಪರಿಹಾರದ ಕುರಿತ ರಾಜ್ಯದ  ನಿಯೋಗದೊಂದಿಗೆ ದೆಹಲಿಗೆ ತೆರಳಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ