ಡಿ.ಕೆ.ಶಿವಕುಮಾರ್ ತಮ್ಮ ಹೆಸರನ್ನು ಕೆಡಿ ಶಿವಕುಮಾರ್ ಅಂತ ಇಟ್ಟುಕೊಳ್ಳಬೇಕಿತ್ತು- ಈಶ್ವರಪ್ಪ ವ್ಯಂಗ್ಯ

ಸೋಮವಾರ, 22 ಏಪ್ರಿಲ್ 2019 (11:21 IST)
ದಾವಣಗೆರೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸೋಲಿಗೆ ಈಶ್ವರಪ್ಪ ಶ್ರಮಿಸುತ್ತಿದ್ದಾರೆ ಎಂಬ ಎಚ್.ಡಿ.ರೇವಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಅವರು ರೇವಣ್ಣ ಕೊಳೆತ ನಿಂಬೆಹಣ್ಣು ಎಂದು ವ್ಯಂಗ್ಯವಾಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ನನಗೆ ತಾಯಿ ಸಮಾನ, ತಾಯಿಗೆ ಎಂದೂ ಮೋಸ ಮಾಡುವುದಿಲ್ಲ ಎಂದು ರೇವಣ್ಣ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಹಾಗೇ ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ ಅವರು, ಸೊಕ್ಕಿನ ಮಾತಿನಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ 37 ಸಾವಿರ ಮತಗಳ ಅಂತರದಿಂದ ಸೋತರು. ಅದೇ ಸೊಕ್ಕಿನ ಮಾತಿನಿಂದ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡರು ಎಂದು ಏಕವಚನದಲ್ಲಿಯೇ  ವಾಗ್ದಾಳಿ ನಡೆಸಿದ್ದಾರೆ. 


ಅಲ್ಲದೇ ಸಚಿವ ಡಿ.ಕೆ.ಶಿವಕುಮಾರ್ ಅವರು ಕೆಡಿ ಶಿವಕುಮಾರ್ ಅಂತ ಹೆಸರು ಇಟ್ಟುಕೊಳ್ಳಬೇಕಿತ್ತು. ಕಳ್ಳ ಶಿವಕುಮಾರ್ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಬೇನಾಮಿ ಆಸ್ತಿ ಸಿಕ್ಕಿದೆ. ಅವನು ಡಿ.ಕೆ.ಶಿವಕುಮಾರ್ ಅಲ್ಲ ಕಳ್ಳ ಶಿವಕುಮಾರ್ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ