ಅಪರೇಷನ್ ಕಮಲಕ್ಕೆ ಒಳಗಾದವರಿಗೆ ಜನ ಪಾಠ ಕಲಿಸ್ತಾರೆ-ಅನರ್ಹರ ವಿರುದ್ಧ ಡಿಕೆಶಿ ಕಿಡಿ

ಬುಧವಾರ, 27 ನವೆಂಬರ್ 2019 (10:54 IST)
ರಾಮನಗರ : ಅಪರೇಷನ್ ಕಮಲಕ್ಕೆ ಒಳಗಾದವರಿಗೆ ಜನ ಪಾಠ ಕಲಿಸ್ತಾರೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ  ಡಿಕೆ ಶಿವಕುಮಾರ್ ಹೇಳಿದ್ದಾರೆ.



ರಾಮನಗರದಲ್ಲಿ ಪ್ರಚಾರಕಾರ್ಯದಲ್ಲಿ ತೊಡಗಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಜನ ಪ್ರಜ್ಞಾವಂತರಾಗಿದ್ದಾರೆ. ಒಳ್ಳೇ ತೀರ್ಪು ನೀಡ್ತಾರೆ. ಮಾತೃಭೂಮಿ, ಪಕ್ಷಕ್ಕೆ ಮೋಸ ಮಾಡಿದವರಿಗೆ ಪಾಠ ಕಲಿಸ್ತಾರೆ ಎಂದು ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.


ಹಾಗೇ ಚಿಕ್ಕಬಳ‍್ಳಾಪುರಕ್ಕೆ ಮೆಡಿಕಲ್ ಕಾಲೇಜು ವಿಚಾರದ ಬಗ್ಗೆ ಮಾತನಾಡಿದ ಅವರು,  ಚಿಕ್ಕಬಳ‍್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಅಂತಾ ನಾನೆಲ್ಲಿ ಹೇಳಿದ್ದೇನೆ? ಯಡಿಯೂರಪ್ಪನವರು ನೂರು ಮೆಡಿಕಲ್ ಕಾಲೇಜು ಕೊಡಲಿ. ನಾನು ಯಾರಿಗೂ ಮೋಸ ಮಾಡಿಲ್ಲ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ