ಟಿವಿ 9 ಕೇಬಲ್ ಪ್ರಸಾರ ಸ್ಥಗಿತವಾಗುವುದಕ್ಕೆ ನಾನಾಗಲಿ, ಸರ್ಕಾರವಾಗಲೀ ಕಾರಣವಲ್ಲ. ಪ್ರಸಾರ ಸ್ಥಗಿತಗೊಳಿಸುವಂತೆ ನಾವು ಯಾರಿಗೂ ಆದೇಶಿಸಿಲ್ಲ. ಪ್ರಜಾಸತ್ಮಾತ್ಮಕ ಮೌಲ್ಯಗಳಲ್ಲಿ ನಾವು ನಂಬಿಕೆಯಿಟ್ಟವರು. ವೈಯಕ್ತಿಕ ಕಾರಣಗಳಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ.
ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರದ ವಿರುದ್ಧ ವರದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಿ ಟಿವಿ9 ಪ್ರಸಾರ ಮಾಡದಂತೆ ಕೇಬಲ್ ಆಪರೇಟರ್ಗಳಿಗೆ ಕರ್ನಾಟಕ ಸರ್ಕಾರ ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಿನ್ನೆ ಸಂಜೆಯಿಂದಲೇ ಟಿವಿ9 ಪ್ರಸಾರವನ್ನು ಸ್ಥಗಿತಗೊಳಿಸಲಾಗಿದೆ.