ನಿಮ್ಮ ನ್ಯೂಸ್‍ಗಳಿಗೆ ನನ್ನ ಬಲಿ ಕೊಡಬೇಡಿ- ಮಾಧ್ಯಮಗಳ ವಿರುದ್ಧ ಸಿಎಂ ಗರಂ

ಬುಧವಾರ, 16 ಜನವರಿ 2019 (07:49 IST)
ಬೆಂಗಳೂರು : ಆಪರೇಷನ್ ಕಮಲದ  ವಿಚಾರಕ್ಕೆ ಸಂಬಂಧಿಸಿದಂತೆ  ನಿಮ್ಮ ನ್ಯೂಸ್‍ಗಳಿಗೆ ನನ್ನ ಬಲಿ ಕೊಡಬೇಡಿ ಎಂದು ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.


ನಗರದ ಕೆಕೆ ಗೆಸ್ಟ್ ಹೌಸ್ ಬಳಿ ಮಾತನಾಡಿದ ಸಿಎಂ, ‘ನನ್ನ ಸರ್ಕಾರದ ಶಕ್ತಿ ಎಷ್ಟಿದೆ ಅಂತ ನನಗೆ ಚೆನ್ನಾಗಿ ಗೊತ್ತಿದೆ. ಪಕ್ಷೇತರ ಶಾಸಕರು ಹೋದ ತಕ್ಷಣ ಸರ್ಕಾರ ಬೀಳುವುದಿಲ್ಲ. ಮಾಧ್ಯಮಗಳೇ ಈ ಸರ್ಕಾರದ ಬಗ್ಗೆ ತೀರ್ಮಾನ ಮಾಡುತ್ತಿವೆ. ಆಪರೇಷನ್ ಕಮಲದ ಸುದ್ದಿ ಹಾಕಿದವರು ನೀವು, ಈಗ ನೀವೇ ನನಗೆ ಮಾಹಿತಿ ಕೊಡಬೇಕು. ನಿಮ್ಮ ನ್ಯೂಸ್‍ಗಳಿಗೆ ನನ್ನ ಬಲಿ ಕೊಡಬೇಡಿ’ ಎಂದು ಕಿಡಿಕಾರಿದ್ದಾರೆ.


ಆಪರೇಷನ್ ಕಮಲಕ್ಕೆ ನಾನೇಕೆ ಪ್ರತಿಕ್ರಿಯೆ ನೀಡಬೇಕು? ಸರ್ಕಾರಕ್ಕೆ ಬೇಕಾಗಿರುವ ಬೆಂಬಲ ಎಷ್ಟು? ನನ್ನ ಬಲ ಏನು ಎನ್ನುವುದು ನನಗೆ ಗೊತ್ತಿದೆ. ಮೈತ್ರಿ ಸರ್ಕಾರ ಬಂಡೆಗಲ್ಲು ಇದ್ದಂತೆ. ನಿಮಗೇಕೆ ನನ್ನ ಸರ್ಕಾರದ ಬಗ್ಗೆ ಚಿಂತೆ? ಕಳೆದ ಒಂದು ವಾರದಿಂದ ಆಪರೇಷನ್ ಕಮಲದ ಕುರಿತಾಗಿಯೇ ಹೇಳುತ್ತಿದ್ದೀರಿ. ನೀವೇ ಸರ್ಕಾರ ಬೀಳಿಸುವ ದಿನಾಂಕ ನಿಗದಿ ಮಾಡುತ್ತಿದ್ದೀರಿ ಎಂದು ಮಾಧ್ಯಮಗಳಿಗೆ ಗರಂ ಆಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ