ಲಿಂಗಾಯುತ ಧರ್ಮ ವಿಚಾರದಲ್ಲಿ ಹೇಳಿಕೆ ಕೊಡಬೇಡಿ: ಬಿಎಸ್‌ವೈ ಕಟ್ಟಾಜ್ಞೆ

ಮಂಗಳವಾರ, 25 ಜುಲೈ 2017 (19:21 IST)
ಸ್ವತಂತ್ರ ಲಿಂಗಾಯುತ ಧರ್ಮ ವಿಚಾರದಲ್ಲಿ ಶಾಸಕರು, ಸಂಸದರು, ಮುಖಂಡರು ಯಾವುದೇ ಹೇಳಿಕೆ ಕೊಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಟ್ಟಾಜ್ಞೆ ಹೊರಡಿಸಿದ್ದಾರೆ.
 
ಸ್ವತಂತ್ರ ಲಿಂಗಾಯುತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಎಲ್ಲಾ ನಾಯಕರು ತಟಸ್ಥರಾಗಿರಬೇಕು ಎಂದು ಕರೆ ನೀಡಿದ್ದಾರೆ.
 
ಮುಂದಿನ ಎರಡು-ಮೂರು ದಿನಗಳವರೆಗೆ ತಟಸ್ಥರಾಗಿದ್ದು, ನಂತರದ ಬೆಳವಣಿಗೆಗಳನ್ನು ಗಮನಿಸಿ ಹೇಳಿಕೆ ನೀಡುವ ಬಗ್ಗೆ ವಿಚಾರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ನಾಳೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು ಸಭೆಯಲ್ಲಿ ಚರ್ಚಿಸಿದ ನಂತರ ಪಕ್ಷದ ನಾಯಕರ ನಿರ್ಧಾರದಂತೆ ಅಭಿಪ್ರಾಯ ವ್ಯಕ್ತಪಡಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ