ಈ ಆ್ಯಪ್ ನಲ್ಲಿ ನೋಂದಣಿ ಮಾಡಿಕೊಂಡ ಜನರೆಷ್ಟು ಗೊತ್ತಾ?

ಶುಕ್ರವಾರ, 18 ಸೆಪ್ಟಂಬರ್ 2020 (21:45 IST)
ರಾಜ್ಯ ಸರಕಾರದ ಇಲಾಖೆಯೊಂದರ ಆ್ಯಪ್ ನಲ್ಲಿ ದಾಖಲೆ ಪ್ರಮಾಣದಲ್ಲಿ ಜನರು ನೋಂದಣಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ  ಆಪ್ ಮೂಲಕ  ಸಮೀಕ್ಷೆ ಕಾರ್ಯ ಯಶಸ್ವಿಯಾಗಿದ್ದು, ಒಂದು ಕೋಟಿಗೂ ಹೆಚ್ವು ರೈತರು ಬೆಳೆ ಸಮೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಈ ಬಾರಿ ಉತ್ತಮ ಬೆಳೆಯೂ ಆಗುವ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಬೆಳೆ ಸಮೀಕ್ಷೆ ಆಪ್ ನಲ್ಲಿ ಒಂದು ಕೋಟಿಗೂ ಹೆಚ್ವು ರೈತರು ಯಶಸ್ವಿಯಾಗಿ ನೋಂದಣಿ ಮಾಡಿಕೊಂಡಿದ್ದಾರೆ.

ರೈತರು ತಾವು ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವರು ಸ್ವತಂತ್ರರು. ಅವರು ಎಪಿಎಂಸಿಗಳಿಗೆ ತಂದು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕೆಂದೇನೂ ಇಲ್ಲ.

ಈ ಬಾರಿ ರಾಜ್ಯದಲ್ಲಿ ಉತ್ತಮ‌ ಮಳೆಯಾಗಿರುವುದರಿಂದ ಉತ್ತಮ‌ ಬೆಳೆಯೂ ಆಗುವ ನಿರೀಕ್ಷೆ ಇದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ