ದೇವೇಗೌಡ ಮತ್ತು ಕುಮಾರಸ್ವಾಮಿಯನ್ನು ರಾಹು, ಕೇತು, ಶನಿ ಎಂದ ಜೆಡಿಎಸ್ ಸಚಿವ ಯಾರು ಗೊತ್ತಾ?

ಮಂಗಳವಾರ, 2 ಅಕ್ಟೋಬರ್ 2018 (11:26 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಟಾಂಗ್‌ ನೀಡುವ ಭರದಲ್ಲಿ ತಮ್ಮ ಪಕ್ಷದ ವರಿಷ್ಠ ದೇವೆಗೌಡರನ್ನು ರಾಹು, ಕೇತು, ಶನಿ ಎಂದು ಹೇಳುವ ಮೂಲಕ ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಮುಜುಗರಕ್ಕೀಡಾಗಿದ್ದಾರೆ.


ಯಡಿಯೂರಪ್ಪನವರು 'ಜೆಡಿಎಸ್‌ನಲ್ಲಿ ರಾಹು, ಕೇತು, ಶನಿ ಇದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಪುಟ್ಟರಾಜು ಅವರು ಜೆಡಿಎಸ್‌ ವರಿಷ್ಠರಾದ ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ.ಕುಮಾರಸ್ವಾಮಿ ಬಿಟ್ಟು ನಮ್ಮಲ್ಲಿ ಯಾವ ರಾಹು, ಕೇತು, ಶನಿ ಇಲ್ಲ ಎಂದು ಹೇಳುವ ಮೂಲಕ ಪೇಚಿಗೆ ಸಿಲುಕಿದ್ದಾರೆ.


ತಕ್ಷಣವೇ ತಮ್ಮ ತಪ್ಪಿನ ಅರಿವಾಗಿ ಮಾತು ಬದಲಿಸಿ, 'ಬಿಜೆಪಿಯಲ್ಲಿಯೇ ರಾಹು, ಕೇತು, ಶನಿ ಇದೆ. ಯಡಿಯೂರಪ್ಪ ಅವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ದೈವಾಂಶ ಸಂಭೂತರು' ಎಂದು ಹಾಡಿ ಹೊಗಳುವ ಮೂಲಕ ಮರೆಮಾಚುವ ಪ್ರಯತ್ನ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ