ಕಾಂಗ್ರೆಸ್ ನಾಯಕರಿಗೆ ಯತ್ನಾಳ್ ನೀಡಿದ ಖಡಕ್ ಎಚ್ಚರಿಕೆ ಏನು ಗೊತ್ತಾ?

ಶನಿವಾರ, 10 ನವೆಂಬರ್ 2018 (14:59 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದಾಗಲಿ ಅಥವಾ ಹಗುರವಾಗಿ ಮಾತನಾಡುವುದಾಗಲಿ ಮಾಡಿದರೆ ಅಂಥವರ ನಾಲಿಗೆ ಸುಡಬೇಕಾಗುತ್ತದೆ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮೋದಿ ಅವರನ್ನು ಜೀವಂತವಾಗಿ ಸುಡುತ್ತೇವೆ ಎಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿಕೆ ವಿರುದ್ಧ ಖಂಡನೆ ವ್ಯಕ್ತಪಡಿಸಿರುವ ಯತ್ನಾಳ್, ಉದ್ಧತನದಿಂದ ಜಯಚಂದ್ರ ಹೇಳಿಕೆ ನೀಡುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಹತಾಶೆಯ ಮನಸ್ಥಿತಿ ತೋರಿಸುತ್ತದೆ ಎಂದಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕೆಟ್ಟದಾಗಿ ಮಾತನಾಡಿದರೆ ನಾವೂ ಅದೇ ಭಾಷೆಯಲ್ಲಿ ಹೇಳಬೇಕಾಗುತ್ತದೆ ಎಂದಿದ್ದಾರೆ.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ