ಪರಮೇಶ್ವರ್ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ ನಡೆಸಲು ಕಾರಣವೇನು ಗೊತ್ತಾ?

ಶುಕ್ರವಾರ, 11 ಅಕ್ಟೋಬರ್ 2019 (12:13 IST)
ಬೆಂಗಳೂರು : ಮಾಜಿ ಡಿಸಿಎಂ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಇದಕ್ಕೆ ಕಾರಣವೆನೆಂಬ ಮಾಹಿತಿ ಇದೀಗ ತಿಳಿದುಬಂದಿದೆ.




ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ(ನೀಟ್) ಪರೀಕ್ಷೆಯಲ್ಲಿ ತೇರ್ಗಡೆಯಾದ ಇಬ್ಬರು ವಿದ್ಯಾರ್ಥಿಗಳ ಸೀಟ್ ಅನ್ನು ಬ್ಲಾಕ್ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಗೆ ದೂರು ದಾಖಲಾದ ಹಿನ್ನಲೆಯಲ್ಲಿ ಮಾಹಿತಿ ಕಲೆಹಾಕಲು ಐಟಿ ಗುರುವಾರ ದಾಳಿ ನಡೆಸಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.


ಅಲ್ಲದೇ ತೆರಿಗೆಯನ್ನು ವಂಚಿಸಲೆಂದೇ ಕಾಲೇಜಿನ ಆಡಳಿತ ಮಂಡಳಿ,  ಮ್ಯಾನೇಜ್‍ಮೆಂ ಟ್ ಕೋಟಾದ ಅಡಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಬಳಿಯಿಂದ ನಗದು ರೂಪದಲ್ಲಿ ಶುಲ್ಕವನ್ನು ಕಾಲೇಜ್ ಪಾವತಿಸಿಕೊಳ್ಳುತ್ತಿದೆ. ಎನ್ನುವ ಆರೋಪ ಕೇಳಿ ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ