5 ಲಕ್ಷ ಸಾಲವಿದ್ದ ರೈತ ಮಾಡಿದ್ದೇನು ಗೊತ್ತಾ?

ಶನಿವಾರ, 5 ಜನವರಿ 2019 (16:57 IST)
ಸಾಲಬಾಧೆ ತಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದೇವರಗುಡಿ ಗ್ರಾಮದಲ್ಲಿ ಈ ಘಟನೆ ಜರುಗಿದೆ. ಅಮರಗುಂಡಪ್ಪ ಮೃತ ರೈತ ಎಂದು ಗುರುತಿಸಲಾಗಿದೆ. ಎಸ್‌ಬಿಐ ಬ್ಯಾಂಕ್‌ನಲ್ಲಿ 5 ಲಕ್ಷ ರೂಪಾಯಿ‌ ಮಾಡಿದ್ದರು. ಆದರೆ ಬೆಳೆ ಕೈ ಕೊಟ್ಟ ಹಿನ್ನೆಲೆ ಸಾಲ ಮರುಪಾವತಿ ಸಾಧ್ಯವಾಗದೆ ರೈತ ಕಂಗಾಲಾಗಿದ್ದಾನೆ.

ತನ್ನ ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
,

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ