ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ಮಾಡಿದ್ದೇನು ಗೊತ್ತಾ?

ಬುಧವಾರ, 12 ಡಿಸೆಂಬರ್ 2018 (14:43 IST)
ಆಕೆ ಮದುವೆಯಾಗಿ ಆರು ತಿಂಗಳೂ ಕಳೆದಿರಲಿಲ್ಲ. ಸಂಸಾರದ ಬಗ್ಗೆ ಅರ್ಥ ಮಾಡಿಕೊಳ್ಳುವ ಮುನ್ನವೇ ಆಕೆ ಈಗ ಇಲ್ಲವಾಗಿದ್ದಾಳೆ. 

ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಇಂಗಳದಾಳು ಗ್ರಾಮದಲ್ಲಿ ನಡೆದಿದೆ. ಮಾನಸ( 22) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯಾಗಿದ್ದಾರೆ.

ಆತ್ಮಹತ್ಯೆಗೆ ಪತಿಯ ಕಿರುಕುಳವೇ ಕಾರಣ ಎಂದು ಶಂಕೆ ವ್ಯಕ್ತವಾಗಿದೆ. ಕಳೆದ ಆರು ತಿಂಗಳ ಹಿಂದೆ ಮಾನಸ ಅವರು ಚೆಳ್ಳಕೆರೆ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದ ತಿಪ್ಪೇಸ್ವಾಮಿ ಎಂಬುವರ ಜೊತೆ ಮದುವೆಯಾಗಿತ್ತು. ಆದರೆ ಪತಿ ಕಿರುಕುಳ ಹಾಗೂ ಮಾನಸಿಕ‌ ಹಿಂಸೆ ನೀಡುತ್ತಿದ್ದರೆನ್ನಲಾಗಿದೆ. ಹಾಗಾಗಿ ಪತಿಯೇ ಕೊಲೆ ಮಾಡಿ ಪರಾರಿಯಾಗಿದ್ದಾನೆಂದು ಮಾನಸ ಪೋಷಕರು ಆರೋಪಿಸುತ್ತಿದ್ದಾರೆ‌.

ಸದ್ಯ ಚಿತ್ರದುರ್ಗ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ