ರಾಜೀನಾಮೆ ನೀಡಿರುವ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು ಗೊತ್ತಾ?

ಶನಿವಾರ, 15 ಜೂನ್ 2019 (11:58 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ಧಿ ಕೇಳಿಬಂದಿತ್ತು.




ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರ ಸುಳ್ಳು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ.  ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಾನು ನಿರ್ವಹಿಸಿಕೊಂಡು ಹೋಗುತ್ತಿದ್ದೇನೆ‌‌. ಈ ಸುದ್ದಿಯನ್ನ ಯಾರು ಸೃಷ್ಟಿ ಮಾಡಿದ್ದಾರೋ, ಎಲ್ಲಿಂದ ಹುಟ್ಟಿದೆಯೋ ನನಗೆ ಗೊತ್ತಿಲ್ಲ. ಇದಕ್ಕೆ ಕಾರಣಕರ್ತರು ಯಾರೆಂದು ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.


ನಾನು ಎಲ್ಲರೊಂದಿಗೆ ಒಗ್ಗಟಿನಿಂದ ಹೊಗಬೇಕಿದೆ. ನಾನು ಹೈಕಮಾಂಡ್​ಗೆ ಈವರೆಗೂ ಯಾವುದೇ ಪತ್ರ ಬರೆದಿಲ್ಲ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಮುನ್ನಡೆಸಿಕೊಂಡು ಹೊಗುತ್ತಿದ್ದೇನೆ. ನನ್ನನ್ನು ಮುಂದುವರಿಸುವುದು ಬಿಡುವುದು ಪಕ್ಷದ ವರಿಷ್ಠಗೆ ಬಿಟ್ಟ ವಿಚಾರ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ