ವೃದ್ಧೆಯ ಮೇಲೆ ಹಲ್ಲೆ ನಡೆಸಿ ಮಾಡಿದ್ದೇನು ಗೊತ್ತಾ?

ಭಾನುವಾರ, 10 ಫೆಬ್ರವರಿ 2019 (16:10 IST)
ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕಾನೂನು ಬಾಹಿರ ಕೃತ್ಯ ನಡೆಸಿರುವ ಘಟನೆ ನಡೆದಿದೆ.

ವಾಯು ವಿಹಾರಕ್ಕೆ ತೆರಳಿದ ವೇಳೆ ವೃದ್ಧೆಯ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸಿದ ಬಳಿಕ ವೃದ್ಧೆಯ ಬಳಿಯಿದ್ದ ಸರಗಳ್ಳತನ ಮಾಡಲಾಗಿದೆ. ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುವಿನಲ್ಲಿ ಘಟನೆ ನಡೆದಿದೆ.

ಸುಶೀಲಮ್ಮ ಎಂಬುವರ 45 ಗ್ರಾಂ ಚಿನ್ನದ ಸರವನ್ನು ಚೋರರು ಅಪಹರಿಸಿದ್ದಾರೆ. ಮೊಮ್ಮಗನ ಜೊತೆ ವಾಯು ವಿಹಾರಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ಕಳ್ಳರಿಂದ ನಡೆದ ಕೃತ್ಯ ಇದಾಗಿದೆ.

ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ