ವೇಗವಾಗಿ ಚಲಿಸುತ್ತಿದ್ದ ಕಾರನ್ನು ತಡೆಯಲು ಬಂದ ಹೆಡ್ ಕಾನ್ಸ್ ಟೇಬಲ್ ಗೆ ಆಗಿದ್ದೇನು ಗೊತ್ತಾ?

ಭಾನುವಾರ, 9 ಫೆಬ್ರವರಿ 2020 (11:31 IST)
ಬೆಂಗಳೂರು : ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಲು ಬಂದ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ.


ಧನಂಜಯ್ಯ ಮೃತಪಟ್ಟ ವ್ಯಕ್ತಿ. ಇವರು ಚಿಕ್ಕಜಾಲ ಸಂಚಾರಿ ಠಾಣೆಯಲ್ಲಿ  ಹೆಡ್ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು. ಅತಿವೇಗವಾಗಿ ಬರುತ್ತಿದ್ದ ಕಾರನ್ನು ತಡೆದು ಫೈನ್ ಹಾಕಲು ಮುಂದಾಗಿದ್ದರು. ಆದರೆ ಆ ಕಾರು ಚಾಲಕನ ನಿಯಂತ್ರಣ ತಪ್ಪಿ ಪೇದೆ ಹಾಗೂ ಧನಂಜಯ್ಯ ಗೆ ಡಿಕ್ಕಿ ಹೊಡೆದಿದೆ. ಅತಿಯಾದ ರಕ್ತಸ್ರಾವದಿಂದ ಧನಂಜಯ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಪೇದೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಘಟನೆಗೆ ಸಂಬಂಧಿಸಿದಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾರಿನಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ