ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಹೆತ್ತವರು ಮಾಡಿದ್ದೇನು ಗೊತ್ತೇ?

ಬುಧವಾರ, 6 ಫೆಬ್ರವರಿ 2019 (06:39 IST)
ವಿಜಯಪುರ : ಅಪ್ರಾಪ್ತ ಬಾಲಕಿಯ ಜನ್ಮ ದಿನಾಂಕ ತಿದ್ದುಪಡಿ ಮಾಡಲು ಒಪ್ಪದ ಶಾಲಾ ಮುಖ್ಯೋಪಾಧ್ಯಾಯರ ಮೇಲೆ ಬಾಲಕಿ ಪೋಷಕರು ಹಲ್ಲೆ ಮಾಡಿರುವ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ನಡೆದಿದೆ.

ರಾಜು ಮೇಲಿನಮನೆ ಎಂಬವರು ತಮ್ಮ ಮಗಳ ವಿವಾಹವನ್ನ ತಮ್ಮ ಗ್ರಾಮದಲ್ಲಿ ನಡೆಯುತ್ತಿದ್ದ ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ ಮಾಡಲು ಮುಂದಾಗಿದ್ದರು. ಆದರೆ ಬಾಲಕಿ ಅಪ್ರಾಪ್ತಳಾದ ಹಿನ್ನಲೆಯಲ್ಲಿ ಆಕೆಯ ಜನ್ಮದಿನಾಂಕ ತಿದ್ದುಪಡಿ ಮಾಡಿಕೊಡಲು ಬಾಲಕಿಯ ಶಾಲೆಯ ಮುಖ್ಯೋಪಾಧ್ಯಾಯರನ್ನು ಒತ್ತಾಯಿಸಿದ್ದಾರೆ.

 

ಆಗ ಮುಖ್ಯೋಪಾಧ್ಯಾಯರು ಇದಕ್ಕೆ ಒಪ್ಪದಿದ್ದಾಗ ಕೋಪಗೊಂಡ ಬಾಲಕಿ ಪೋಷಕರು ಮುಖ್ಯೋಪಾಧ್ಯಾಯರ ಮೇಲೆ ಹಲ್ಲೆ ಮಾಡಿದ್ದಾರೆ. ಸದ್ಯ ಮುಖ್ಯೋಪಾಧ್ಯಾಯ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ