ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಸಿಬ್ಬಂದಿ ಮಾಡಿದ್ದೇನು ಗೊತ್ತಾ...?

ಶುಕ್ರವಾರ, 8 ಡಿಸೆಂಬರ್ 2017 (07:20 IST)
ಬಳ್ಳಾರಿ: ಬ್ಯಾಂಕ್ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್ ಸಿಬ್ಬಂದಿಯೊಬ್ಬ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬಳ್ಳಾರಿಯಲ್ಲಿ ನಡೆದಿದೆ.

ಕೃಷ್ಣಾರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ. ಇತ ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ನಿವಾಸಿಯಾಗಿದ್ದು, ಬಳ್ಳಾರಿಯ ಅಲಿಪುರ ಶಾಖೆಯ ಪ್ರಗತಿ ಕೃಷ್ಣ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿನ ಬ್ಯಾಂಕ್ ಮ್ಯಾನೇಜರಾದ ಶಿವಪ್ರಸಾದ್  ಕೃಷ್ಣಾರೆಡ್ಡಿಗೆ ಕಿರುಕುಳ ನೀಡುತ್ತಿದ್ದು, ಬೇಸತ್ತ ಕೃಷ್ಣಾರೆಡ್ಡಿ ಕಣೀಕಲ್ ಬಳಿ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ.

 
ಇತ ಆತ್ಮಹತ್ಯೆಗೂ ಮುನ್ನ ಮೊಬೈಲ್ ನಲ್ಲಿ ತನ್ನ ಸಾವಿಗೆ ಕಾರಣವೆನೆಂಬುದ್ದನ್ನು ವಿಡಿಯೊ ರೆರ್ಕಾಡ್ ಮಾಡಿದ್ದಾರೆ. ಬಳ್ಳಾರಿ ಗ್ರಾಮದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ