ಅನೈತಿಕ ಸಂಬಂಧ ಪ್ರಶ್ನಿಸಿದ ಪತಿಗೆ ಪತ್ನಿಯ ಪ್ರಿಯಕರ ಮಾಡಿದ್ದೇನು ಗೊತ್ತಾ?

ಗುರುವಾರ, 19 ಡಿಸೆಂಬರ್ 2019 (12:14 IST)
ಬಾಗಲಕೋಟೆ: ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಹತ್ಯೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದಲ್ಲಿ ನಡೆದಿದೆ.



ಮಂಜಪ್ಪ ವಡ್ಡರ್ (35) ಕೊಲೆಯಾದ ಪತಿ. ಪತ್ನಿ ಯಲ್ಲವ್ವ ವಡ್ಡರ್ ಪ್ರಿಯಕರ ಮಲ್ಲಪ್ಪ ಹೊದ್ಲೂರ್ ಕೊಲೆ ಮಾಡಿದ ಆರೋಪಿ.   ಯಲ್ಲವ್ವ ಹಾಗೂ ಮಲ್ಲಪ್ಪ ನಡುವೆ ಅನೈತಿಕ ಸಂಬಂಧವಿದ್ದು, ಈ ವಿಚಾರ ತಿಳಿದ ಪತಿ ಅದನ್ನು ಪ್ರಶ್ನಿಸಿದ್ದಕ್ಕೆ ಆತನನ್ನು ಹೊಡೆದು ಕೊಲೆ ಮಾಡಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಯಲ್ಲವ್ವ ಹಾಗೂ ಆಕೆಯ ಪ್ರಿಯಕರ ಮಲ್ಲಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ