ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ವಿಚಾರದ ಬಗ್ಗೆ ಶಾಸಕ ತನ್ವೀರ್ ಸೇಠ್ ಹೇಳಿದ್ದೇನು ಗೊತ್ತಾ?

ಶುಕ್ರವಾರ, 19 ಫೆಬ್ರವರಿ 2021 (12:03 IST)
ಮೈಸೂರು : ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ವಿಚಾರ ಮನೆಗಳಿಗೆ ಸ್ಟಿಕ್ಕರ್ ಅಂಟಿಸೋದು ಸರಿಯಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವರ ಬಗ್ಗೆ ಅಪಾರ ನಂಬಿಕೆ ಇಟ್ಟಿದ್ದೇವೆ. ನಾವು ಮಾಡುವ ಒಳ್ಳೆ ಕೆಲಸಗಳೇ ಕಾಪಾಡುತ್ತವೆ ಎಂದು ಹೇಳಿದ್ದಾರೆ.

ಹಾಗೇ ಮೈಸೂರು ನಗರ ಪಾಲಿಕೆಯಲ್ಲಿ ಮೈತ್ರಿ  ವಿಚಾರದ ಬಗ್ಗೆ ಮಾತನಾಡಿದ ಅವರು, ನಾಳೆ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾಲಿಕೆ ಸದಸ್ಯರ ಸಭೆ ಕರೆಯಲಾಗಿದೆ. ಮೇಯರ್ ಯಾರಾಗ್ತಾರೆಂದು ಫೆ.24ರವರೆಗೆ ಕಾಯಿರಿ. ಈಗಾಗಲೇ ವರಿಷ್ಠರ ಜೊತೆ ಚರ್ಚೆ ಮಾಡಲಾಗಿದೆ. ಜೆಡಿಎಸ್ ನಾಯಕರು ಕೂಡ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ. ಕೋಮುವಾದ ಶಕ್ತಿ ದೂರವಿಡಲು ಮುಂದಾಗಿದ್ದೇವೆ, ನಾವು ಹಗಲು ಹೊತ್ತಿನಲ್ಲಿ ರಾಜಕೀಯ ಮಾಡುವವರು, ರಾತ್ರಿ ರಾಜಕಾರಣ ಮಾಡೋರು ಪಾಲಿಕೆಯೇ ಅಂತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ