ಬಿಸಿಯೂಟ ಸೇವಿಸಲು ಬಂದ ವಿದ್ಯಾರ್ಥಿನಿಗೆ ಶಿಕ್ಷಕ ಮಾಡಿದ್ದೇನು ಗೊತ್ತಾ?

ಮಂಗಳವಾರ, 23 ಏಪ್ರಿಲ್ 2019 (07:12 IST)
ಬೆಂಗಳೂರು : ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.


ಬೇಸಿಗೆ ರಜೆ ಇದ್ದರೂ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದ ಹಿನ್ನಲೆಯಲ್ಲಿ ಶಾಲೆಗೆ ಬಂದ ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿ ಮನೆಗೆ ಹಿಂದಿರುಗಿದ್ದಾರೆ. ಆದರೆ 5 ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಮನೆಗೆ ಕಳುಹಿಸದೆ ಶಾಲೆಯಲ್ಲಿಯೇ ಉಳಿಸಿಕೊಂಡ ಶಿಕ್ಷಕನೊಬ್ಬ, ಆಕೆಯನ್ನು ಮೇಲೆ ಕೂರಿಸಿಕೊಂಡು ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.


ಈ ವಿಚಾರವನ್ನು  ವಿದ್ಯಾರ್ಥಿನಿ ಪೋಷಕರಿಗೆ ತಿಳಿಸಿದ ಕಾರಣ ಶಾಲೆಯ ಬಳಿ ಜಮಾಯಿಸಿದ ಪೋಷಕರು ಹಾಗೂ ಗ್ರಾಮಸ್ಥರು ಶಿಕ್ಷಕನನ್ನು ಥಳಿಸಿ ವಿಶ್ವನಾಥಪುರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ