ಯುವಕನಿಂದ ಮೋಸ ಹೋಗಿ ಗರ್ಭಿಣಿಯಾದವಳಿಗೆ ಗ್ರಾಮ ಮುಖಂಡರು ಮಾಡಿದ್ದೇನು ಗೊತ್ತಾ?

ಸೋಮವಾರ, 27 ಮೇ 2019 (10:20 IST)
ದಾವಣಗೆರೆ :  ಯುವಕನಿಂದ ಮೋಸ ಹೋಗಿ ಗರ್ಭಿಣಿಯಾದ ಮೂಗ ಯುವತಿಗೆ ನ್ಯಾಯ ಕೊಡಿಸಬೇಕಾದ ಗ್ರಾಮದ ಮುಖಂಡರು ಯುವತಿಯ ಜೊತೆಗೆ  ಆಕೆಯ ಕುಟುಂಬವನ್ನೇ ಗ್ರಾಮದಿಂದ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ.




ಗ್ರಾಮದ ಯುವಕ ಜಮ್ಮಣ್ಣ ಎಂಬವನು ಮೂಗ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿ ಗರ್ಭಿಣಿ ಮಾಡಿದ್ದಲ್ಲದೇ ಆಕೆ ಗರ್ಭಿಣಿ ಎಂದು ತಿಳಿದ ತಕ್ಷಣ ಜಮ್ಮಣ್ಣ ತಲೆಮರೆಸಿಕೊಂಡಿದ್ದಾನೆ.


ಈ ಬಗ್ಗೆ ಯುವತಿ ಗ್ರಾಮದ ಮುಖಂಡರಲ್ಲಿ  ನ್ಯಾಯ ಕೊಡಿಸುವಂತೆ ಮನವಿ ಮಾಡಿದರೆ ಅವರ ಇಡೀ ಕುಟುಂಬವನ್ನೇ ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ. ವಿಷಯ ತಿಳಿದ ಸ್ವಾಮಿ ವಿವೇಕಾನಂದ ಅಂಗವಿಕಲರ ಸಂಘದವರು ಯುವತಿಯ ಪರಿಸ್ಥಿತಿ ನೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲವಾದ್ದರಿಂದ ಪೊಲೀಸ್ ಠಾಣೆ ಹಾಗೂ ಯುವಕನ ಮನೆ ಮುಂದೆ ಉಗ್ರವಾದ ಹೋರಾಟ ಮಾಡುವುದಾಗಿ ಸಂಘದವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ