ಮೈತ್ರಿ ಸರಕಾರ ಹಳಸಿದೆ ಎಂದೋರಾರು?

ಶುಕ್ರವಾರ, 24 ಮೇ 2019 (17:48 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಹಳಸಿದೆ. ಮುಂದೆ ರಾಜಕೀಯ ಧ್ರುವೀಕರಣ ಆಗುತ್ತದೆ ಅಂತ ಮಾಜಿ ಸಚಿವ ಹೇಳಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ. ಕಾಂಗ್ರೆಸ್ ವಿಭಜನೆಯ ಹಾದಿಯಲ್ಲಿದೆ. ಅದರ ಪರಿಣಾಮ ರಾಜ್ಯದ ಮೇಲೂ ಆಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಳಸಿಕೊಂಡಿದೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನದ ಬಳಿಕ ರಾಜ್ಯ ರಾಜಕೀಯದಲ್ಲಿ ದೃವೀಕರಣ ಆರಂಭವಾಗುತ್ತದೆ. ಹೀಗಂತ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಸರ್ಕಾರ ರಚನೆಗೆ ಅಗತ್ಯವಾಗಿರುವಷ್ಟು ಶಾಸಕರ ಸಂಖ್ಯಾಬಲ ಬಿಜೆಪಿಗೆ ದೊರಕುತ್ತದೆ. ಅದು ಹೇಗೆ ಏನು ಎಂಬುದನ್ಮು ನೀವೇ ನೋಡುತ್ತೀರಿ ಅಂತ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ