ಮಾವ ಮಂಜುನಾಥ್‌ ಗೆಲುವಿನ ಬಗ್ಗೆ ಕಿಂಚಿತ್ತು ಸಂಶಯ ಬೇಡ: ನಿಖಿಲ್ ಕುಮಾರಸ್ವಾಮಿ

Sampriya

ಮಂಗಳವಾರ, 7 ಮೇ 2024 (18:29 IST)
Photo Courtesy X
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ವಿರುದ್ಧ  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ದ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌. ಮಂಜುನಾಥ್‌ ಅವರು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಈ ಬಗ್ಗೆ ಕಿಂಚಿತ್ತು ಸಂಶಯ ಬೇಡ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ವೆಂಕಟಪ್ಪನ ದೊಡ್ಡಿ ಗ್ರಾಮದಲ್ಲಿ ಕಾರ್ಯಕರ್ತರ ಮನೆಗೆ ಭೇಟಿ ನೀಡಿ ನಂತರ ಮಾಧ್ಯಮದವರ ಜತೆ ಮಾತನಾಡಿ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರು ಸ್ವಯಂ ಪ್ರೇರಿತವಾಗಿ ಫೀಲ್ಡ್‌ಗೆ ಇಳಿದು ಡಾ.ಸಿ ಎನ್ ಮಂಜುನಾಥ್ ಅವರ ಪರ ಕೆಲಸ ಮಾಡಿದ್ದು ಹೆಚ್ಚಿನ ಅಂತರದಿಂದ ಅವರು ಗೆಲುವು ಸಾಧಿಸಲಿದ್ದಾರೆ ಎಂದರು.

ಈ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಜೆಡಿಎಸ್‌ - ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ