ಕೇಂದ್ರ ಸಚಿವೆ ಉಮಾಭಾರತಿಯವರು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರ ಕಟ್ಟಾ ಶಿಷ್ಯೆಯಾಗಿರುವ ಕಾರಣಕ್ಕಾಗಿ ಸ್ವಾಮೀಜಿ ಅವರು ಕರೆ ಮಾಡಿ, ಕರ್ನಾಟಕ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಬಾರದೆಂದು ಹೇಳಿದ್ದಾರೆಂದು ಮಠದ ಮೂಲಗಳು ತಿಳಿಸಿವೆ.
ಉಡುಪಿಯ ಪೇಜಾವರ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವೇಶತೀರ್ಥ ಸ್ವಾಮೀಜಿ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಿಂದ ನಮಗೆ ಈವರೆಗೂ ಅನುಕೂಲವಾಗಿಲ್ಲ. ಜಲ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯದ ಜನತೆ ಗಲಾಟೆ-ಹಿಂಸಾಚಾರ ಆಗದಿರಲಿ ಎಂದು ಎರಡು ರಾಜ್ಯಗಳ ಜನತೆಯ ಬಳಿ ಮನವಿ ಮಾಡಿಕೊಂಡರು.