ಕಾವೇರಿ ಹೋರಾಟದಲ್ಲಿ ಭಾಗಿಯಾಗದಂತೆ ಕನ್ನಡ ವಿರೋಧಿ ಅಧಿಕಾರಿ ಎಚ್ಚರಿಕೆ

ಸೋಮವಾರ, 12 ಸೆಪ್ಟಂಬರ್ 2016 (13:54 IST)
ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹೋರಾಟದಲ್ಲಿ ಭಾಗಿಯಾಗದಂತೆ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕಿ ಗೌರಮ್ಮ ಕನ್ನಡ ವಿರೋಧಿ ಸುತ್ತೋಲೆ ಹೊರಡಿಸಿದ್ದಾರೆ.
 
ಒಂದು ವೇಳೆ, ಶಾಲಾ, ಕಾಲೇಜಿನ, ಅಧ್ಯಾಪಕರು ವಿದ್ಯಾರ್ಥಿಗಳು ಹೋರಾಟದಲ್ಲಿ ಭಾಗಿಯಾದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿರುವುದು ಬಹಿರಂಗವಾಗಿದೆ. 
 
 ರಾಜ್ಯದಲ್ಲಿ ಕನ್ನಡ ವಿರೋಧಿ ಅಧಿಕಾರಿಯ ಮುಖವಾಡ ಬಯಲಾಗಿದೆ. ಗೌರಮ್ಮ ಪರವಾಗಿ ಸಹಾಯಕ ಜಂಟಿ ನಿರ್ದೇಶಕ ಶ್ರೀನಾಥ್ ಸಹಿ ಮಾಡಿದ್ದಾರೆ ಎಂದು ಕನ್ನಡ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ