ಮಣ್ಣು ಮಾರಿಕೊಂಡವರು ನೀಡುವ ಹಣದ ಆಸೆಗೆ ಮತ ಮಾರಿಕೊಳ್ಳಬೇಡಿ: ಕುಮಾರಸ್ವಾಮಿ

ಗುರುವಾರ, 2 ಫೆಬ್ರವರಿ 2017 (10:40 IST)
ಭೂತಾಯಿ ಗರ್ಭ ಸೀಳಿ ಮಣ್ಣು ಮಾರಿಕೊಂಡವರು ನೀಡುವ ಹಣದ ಆಸೆಗೆ ನಿಮ್ಮ ಅಮೂಲ್ಯವಾದ ಮತವನ್ನು ಮಾರಿಕೊಳ್ಳಬೇಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ರೆಡ್ಡಿ ಬ್ರದರ್ಸ್‌ಗೆ ಟಾಂಗ್ ನೀಡಿದ್ದಾರೆ.
 
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿ ಕುಮಾರಸ್ವಾಮಿ ಅವರೇ ಸಿಎಂ ಆಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹಾಗೇ ಮಾಡಬೇಡಿ, ಒಂದು ಭಾರಿ ನನಗೆ ಪೂರ್ಣ ಬಹುಮತ ಕೊಡಿ. ನಿಮ್ಮನ್ನು ಸ್ವಾವಲಂಬಿಗಳಾಗಿ ಬದುಕುವಂತೆ ಮಾಡುವುದು ನನ್ನ ಜವಾಬ್ದಾರಿ ಎಂದು ಭರವಸೆ ನೀಡಿದರು. 
 
ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರದಲ್ಲಿ ನನಗೆ ದೊರೆತ 20 ತಿಂಗಳಲ್ಲಿ ರಾಜ್ಯದ ರೈತರು, ಬಡವರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಅಂದಿನ ಹಣಕಾಸು ಸಚಿವ ಬಿ.ಎಸ್.ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡಲು ಸಾಕಷ್ಟು ವಿರೋಧಿಸಿದರು ಎಂದು ಆರೋಪಿಸಿದರು. 
 
ಮುಂಬರುವ ವಿಧಾನಸಭೆಯಲ್ಲಿ ಜೆಡಿಎಸ್ ಸರಕಾರ ಅಸ್ತಿತ್ವಕ್ಕೆ ಬಂದಲ್ಲಿ ಕೇವಲ 24 ಗಂಟೆಯೊಳಗೆ ರೈತರ ಸಾಲ ಮಾನ್ನಾ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ