ದೋಸ್ತಿ ಸರ್ಕಾರದ ಸಂಪುಟ ವಿಸ್ತರಣೆ ಮುಂದೂಡಿದ ಕೈ ನಾಯಕರು. ಕಾರಣವೇನು ಗೊತ್ತಾ?

ಬುಧವಾರ, 5 ಜೂನ್ 2019 (11:06 IST)
ಬೆಂಗಳೂರು : ಸಚಿವ ಸ್ಥಾನದ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು  ಅಸಮಾಧಾನಗೊಂಡ  ಹಿನ್ನಲೆಯಲ್ಲಿ  ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವಾಗುವ  ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.




ಆದಕಾರಣ  ಸಂಪುಟ ವಿಸ್ತರಣೆ ಮುಂದೂಡುವ ಬಗ್ಗೆ ಕೈ ನಾಯಕರು ಚರ್ಚೆ ನಡೆಸುತ್ತಿದ್ದು, ತಕ್ಷಣ ಸಂಪುಟ ವಿಸ್ತರಣೆ ಮಾಡಿದರೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅಸಮಾಧಾನಗೊಳ್ತಾರೆ. ಹೀಗಾಗಿ ಅತೃಪ್ತರು ತಣ್ಣಗಾದ ಬಳಿಕ ವಿಸ್ತರಣೆ ಚಿಂತನೆ ನಡೆಸಲಾಗುವುದು ಎನ್ನಲಾಗಿದೆ.

 

ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ, ರೋಷನ್ ಬೇಗ್ ಗೆ ಸದ್ಯಕ್ಕೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಹಾಗಾಗಿ  ಈಗ ಸಂಪುಟ ವಿಸ್ತರಣೆ ಮಾಡದರೆ ಮತ್ತಷ್ಟು ಸಂಕಷ್ಟ ಶುರುವಾಗಬಹುದು, ಇನ್ನೂ ಹಲವು ನಾಯಕರು ಸಿಡಿದೇಳಬಹುದು. ಹೀಗಾಗಿ ಇನ್ನೂ ಮೂರ್ನಾಲ್ಕು ದಿನ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಬೇಡ ಎಂದು ಕೈ ನಾಯಕರಿಗೆ ಸಲಹೆ ನೀಡಿದ್ದಾರೆ  ಎನ್ನಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ