ಮಾಧ್ಯಮಗಳೊಂದಿಗೆ ಮಾತನಾಡುತ್ತ, ಸೊಸೆ ರಾಜೇಶ್ವರಿ ಶೆಟ್ಟಿ, ಮೊಮ್ಮಗ ನವನೀತ ಶೆಟ್ಟಿ ವಿರುದ್ಧ ಕಿಡಿಕಾರಿರುವ ಗುಲಾಬಿ ಶೆಟ್ಟಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಭೂಮಿಯ ಮೇಲೆ ಅವರು ಇರಲೇ ಬಾರದು ಎಂದು ಕಟುವಾಗಿ ನುಡಿದಿದ್ದಾರೆ.
ಉದ್ಯಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ಬುಧವಾರ ಐದು ಆರೋಪಿಗಳ ವಿರುದ್ಧ ಪ್ರಧಾನ ಹೆಚ್ಚುವರಿ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,300 ಪುಟಗಳ ದೋಷಾರೋಪಣಾ ಪಟ್ಟಿಯಲ್ಲಿ 80ಕ್ಕೂ ಹೆಚ್ಚು ಮಂದಿ ಹೇಳಿಕೆಗಳಿವೆ. 100ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಿಐಡಿ ಪೊಲೀಸರು ಸಂಗ್ರಹಿಸಿದ್ದಾರೆ.
ಮೃತರ ಪತ್ನಿ ರಾಜೇಶ್ವರಿ ಶೆಟ್ಟಿ(50) ಪುತ್ರ ನವನೀತ್ ಶೆಟ್ಟಿ(20), ಶ್ರೀನಿವಾಸ್ ಭಟ್ (26), ರಾಘವೇಂದ್ರ (26) ಪುರೋಹಿತ ನಿರಂಜನ್ ಭಟ್(26), ಹೆಸರು ಆರೋಪ ಪಟ್ಟಿಯಲ್ಲಿದೆ.