ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Krishnaveni K

ಬುಧವಾರ, 18 ಜೂನ್ 2025 (11:59 IST)
Photo Credit: X
ಬೆಂಗಳೂರು: ಡಿಕೆ ಶಿವಕುಮಾರ್ ನಿನ್ನೆ ಪರಿಸರ ದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಸೈಕ್ಲಿಂಗ್ ಮಾಡುವ ಫೋಟೋ ಪ್ರಕಟಿಸುತ್ತಿದ್ದಂತೇ ಪ್ರತಿಕ್ರಿಯಿಸಿರುವ ಉದ್ಯಮಿ ಮೋಹನ್ ದಾಸ್ ಪೈ ಸಾರ್ವಜನಿಕರ ಹಣದಿಮದಲೇ ವಿಧಾನಸೌಧ ನಿರ್ಮಿಸಿರೋದು. ನಾವು ಪ್ರವೇಶ ಮಾಡಬೇಕು ಎಂದರೆ ಶುಲ್ಕ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ ಪೇಜ್ ನಲ್ಲಿ ಡಿಕೆ ಶಿವಕುಮಾರ್ ಅವರಿಗೆ ಉದ್ಯಮಿ ಮೋಹನ್ ದಾಸ್ ಪೈ ಮನವಿ ಮಾಡಿದ್ದಾರೆ. ಮೊದಲೆಲ್ಲಾ ನಮಗೆ ವಿಧಾನಸೌಧದ ಒಳಗೆ ಹೋಗಲು ಮೆಟ್ಟಿಲುಗಳಲ್ಲಿ ಕುಳಿತುಕೊಳ್ಳಲು ಅವಕಾಶವಿತ್ತು. ಆದರೆ ಈಗ ನಮಗೆ ಒಳಗೆ ಹೋಗಲು ಅವಕಾಶವಿಲ್ಲ. ದಯಮಾಡಿ ನಮಗೂ ಒಳಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದರು.

ಇದಕ್ಕೆ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದು ಶುಲ್ಕ ಪಾವತಿಸಿ ಒಳಗೆ ಹೋಗಬಹುದು ಎಂದಿದ್ದಾರೆ. ಅದಕ್ಕೆ ಉತ್ತರಿಸಿರುವ ಮೋಹನ್ ದಾಸ್ ಪೈ ವಿಧಾನಸೌಧ ಕಟ್ಟಿರುವುದು ನಮ್ಮ ತೆರಿಗೆ ಹಣದಲ್ಲಿ. ಈಗ ನಮಗೇ ಪ್ರವೇಶ ಶುಲ್ಕ ಯಾಕೆ ಎಂದು ಮರು ಪ್ರಶ್ನಿಸಿದ್ದಾರೆ. ಹೀಗಾಗಿಯೇ ಮೋಹನ್ ದಾಸ್ ಪೈ ನಮಗೂ ಅವಕಾಶ ಕಲ್ಪಿಸಿ ಎಂದು ಕೇಳಿಕೊಂಡಿದ್ದಾರೆ. ರಾಜ್ಯ ಸರ್ಕಾರ ಇತ್ತೀಚೆಗೆ ವೀಕೆಂಡ್ ನಲ್ಲಿ ವಿಧಾನಸೌಧದ ಒಳಗೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಿದೆಯಾದರೂ ಅದಕ್ಕೆ ಶುಲ್ಕ ನಿಗದಿ ಮಾಡಿದೆ.

ನಿನ್ನೆ ಪರಿಸರದ ನಡಿಗೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ವಿಧಾನಸೌಧದ ಆವರಣದೊಳಗೆ ಸೈಕ್ಲಿಂಗ್ ಮಾಡಿದ ಫೋಟೋ, ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ