ಮನೆ ಮಾಲಕಿಗೆ ಚಾಕುವಿನಿಂದ ಇರಿದು ಚಿನ್ನಾಭರಣ ಕಸಿದು ಪರಾರಿ

ಶನಿವಾರ, 3 ಸೆಪ್ಟಂಬರ್ 2016 (10:24 IST)
ತಾನು ಕೆಲಸ ಮಾಡುತ್ತಿದ್ದ ಮನೆ ಮಾಲಕಿಗೆ ಚಾಲಕ ಚಾಕುವಿನಿಂದ ಇರಿದು ಹಲ್ಲೆ ಮಾಡಿ ಚಿನ್ನಾಭರಣ ಕಸಿದು ಎಸ್ಕೇಪ್ ಆಗಿರುವ ಘಟನೆ ಸಂಭವಿಸಿದೆ. ಎಲ್‌ಎನ್‌ಟಿ ಸೌತ್ ಸಿಟಿ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತರ ಜತೆ ಸೇರಿ  ಮಾಲಕಿ ಸುನಂದಾ ಅವರ  ಚಾಲಕನೇ ಈ ದುಷ್ಕೃತ್ಯವೆಸಗಿದ್ದಾನೆ.

ಮಾಲಕಿ ಸುನಂದಾ ಅವರನ್ನು ಕಾರಿನಲ್ಲಿ ಡ್ರಾಪ್ ಮಾಡಿದ ಬಳಿಕ ಪಾರ್ಕಿಂಗ್‌ನಲ್ಲಿ ಕಾರು ನಿಲ್ಲಿಸಿದ ಚಾಲಕ  ಸುನಂದಾಗೆ ಚಾಕುವಿನಿಂದ ಇರಿದು ಚಿನ್ನಾಭರಣವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ.

ಸುನಂದಾ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಅಲ್ಲಿ ನೆರೆದಿದ್ದ ಜನರು ಆಸ್ಪತ್ರೆಗೆ ಸೇರಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ