ಭಾರಿ ಮಳೆಗೆ ಸಿಲುಕಿದ ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಗುರುವಾರ, 20 ಏಪ್ರಿಲ್ 2017 (18:52 IST)
ಮೂವರು ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾರಿ ಮಳೆಯಿಂದಾಗಿ ಹಾರಾಟ ಸಾಧ್ಯವಾಗದೆ ಮತ್ತೆ ಮೈಸೂರಿಗೆ ಹಿಂದುರಿಗಿದ ಘಟನೆ ವರದಿಯಾಗಿದೆ.
 
ಮಂಡ್ಯ ಜಿಲ್ಲೆಯ ಮಳವಳ್ಳಿ ಬಳಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಚಿವರು, ಸಿಎಂ ಸಿದ್ದರಾಮಯ್ಯರನ್ನು ಮೈಸೂರಿಗೆ ಬಿಟ್ಟು, ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿರುವಾಗ ಮಳವಳ್ಳಿ ಬಳಿ ಸುರಿದ ಭಾರಿ ಮಳೆಯಿಂದಾಗಿ ಹಾರಾಟ ಸಾಧ್ಯವಾಗದೆ ಮತ್ತೆ ಮೈಸೂರಿಗೆ ಹೆಲಿಕಾಪ್ಟರ್ ಮರಳಿದೆ. 
 
ಹೆಲಿಕಾಪ್ಟರ್‌ನಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಮತ್ತು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಪ್ರಯಾಣಿಸುತ್ತಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ