ವಿಧಾನಸೌಧದಲ್ಲಿ ಇಂದು ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳೆ ನಷ್ಟದ ಪ್ರಮಾಣ ನಿಖರ ಮಾಹಿತಿ ಸಂಗ್ರಹಿಸಿದ ನಂತರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಆರ್ಥಿಕ ನೆರವಿಗಾಗಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು. ಮುಂಗಾರು ಬೆಳೆ ನಷ್ಠಕ್ಕೆ ಸಂಬಂಧಿಸಿದಂತೆ ಸುಮಾರು 470 ಕೋಟಿ ರೂ. ಪರಿಹಾರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದ 15 ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕೇಂದ್ರಕ್ಕೆ ಈಗಾಗಲೇ ಮನವಿ ಸಲ್ಲಿಸಿದ್ದರೂ, ಈ ವರ್ಷ ಈವರೆಗೂ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಈ ತಿಂಗಳ ಅಂತ್ಯಕ್ಕೆ ಹಣ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆ ಇದೆ ಎಂದರು.